ಸುಮಾರು 34-35 ವರ್ಷಗಳ ಹಿಂದೆ,  ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ವಿದ್ಯಾವರ್ಧಕ ಸಂಘ – ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಬಿ.ಎಸ್ಸಿ. ಪದವಿಯ ಕನ್ನಡ ತರಗತಿಯೊಂದರಲ್ಲಿ, ಶ್ರೀಮತಿ ಶಾಂತಾ ನಾಗರಾಜ್ ಎಂಬ ಕನ್ನಡ ಅಧ್ಯಾಪಕಿಯು ಉಲ್ಲೇಖಿಸಿದ ವಾಕ್ಯ ಇದು‌. ಈ ಲೇಖಕಿ‌ ಕೂಡಾ ಆ ತರಗತಿಯ ವಿದ್ಯಾರ್ಥಿನಿಯರ ಗುಂಪಿನಲ್ಲಿ ಒಬ್ಬಳಾಗಿದ್ದಳು. 25-30 ಜನ ಅರಳುಗಣ್ಣಿನ ಮತ್ತು ಅಷ್ಟೇ ತುಂಟ ಸ್ವಭಾವದ ವಿಜ್ಞಾನದ ವಿದ್ಯಾರ್ಥಿನಿಯರಿಗೆ ಕನ್ನಡದ ಆದಿಕವಿಯ ಈ  ಅವಿಸ್ಮರಣೀಯ ಉದ್ಗಾರದ ಮಹತ್ವ ಎಷ್ಟು ಅರ್ಥವಾಯಿತೋ ಬಿಟ್ಟಿತೋ! ಆದರೆ ಮೇಡಂ […]