ಕಂಬಕ್ಕೆ ಕಟ್ಟಲ್ಪಟ್ಟ ದೇವರು.. ಕನ್ನಡ ಜನಪದರ ಭಾವಸಿರಿಯ ತವರು

ಈಚೆಗೆ ನಮ್ಮ ಹಂಪಿನಗರದ ಏಳನೇ ಮುಖ್ಯರಸ್ತೆಯ ಬಳಿ ಹೂವು ಕೊಂಡುಕೊಳ್ಳುತ್ತಿದ್ದಾಗ ಒಂದು ಕುತೂಹಲಕರ ವಿಷಯವನ್ನು ಗಮನಿಸಿದೆ. ಹೂಮಾರುವವರು ತಮ್ಮ ಬುಟ್ಟಿ ಇತ್ಯಾದಿಗಳನ್ನು ಇಟ್ಟುಕೊಂಡ ಜಾಗದ ಪಕ್ಕದಲ್ಲಿ ಇದ್ದ ಕಂಬವೊಂದಕ್ಕೆ  ಕೆಲವು ಪುಟ್ಟ ಪುಟ್ಟ ದೇವರ ವಿಗ್ರಹಗಳನ್ನು  ಕಟ್ಟಿಟ್ಟದ್ದು ಕಂಡುಬಂತು.‌  ಬಹುಶಃ ಆ ಹೂ ಮಾರುವವರು ಮತ್ತು ಸುತ್ತಮುತ್ತ ಇದ್ದ ಹಣ್ಣಿನ ವ್ಯಾಪಾರಿಗಳು ಆ ವಿಗ್ರಹಗಳಿಗೆ ನಮಿಸಿ ತಮ್ಮ ದಿನದ ವ್ಯಾಪಾರವನ್ನು ಶುರು ಮಾಡುತ್ತಾರೆಂದು ತೋರುತ್ತದೆ. ಕಲ್ಲಿಗೆ ಭಕ್ತಿಯಿಂದ ಕುಂಕುಮ ಹಚ್ಚಿ ಹೂ ಇಟ್ಟು ಅದನ್ನೇ ಭಗವಂತನೆಂದು ತಿಳಿಯುವ […]

Electrostatic generator

ಎಲೆಕ್ಟ್ರೋಸ್ಟ್ಯಾಟಿಕ್ ಜೆನರೇಟರ್ – ಸ್ಥಾಯೀವಿದ್ಯುತ್ತಿನ ಮೂಲಕ ನಿರಂತರ ವಿದ್ಯುತ್ ಸರಬರಾಜು ಆಗುವಂತೆ ವಿನ್ಯಾಸಗೊಳಿಸಿದ ಒಂದು ಉಪಕರಣ. 

Electrostatic field

ಎಲೆಕ್ಟ್ರೋಸ್ಟ್ಯಾಟಿಕ್ ಫೀಲ್ಡ್ – ಸ್ಥಾಯಿ (ಚಲಿಸದಿರುವ)ವಿದ್ಯುದಂಶದಿಂದ ಉತ್ಪತ್ತಿಯಾದ ವಿದ್ಯುತ್ ಕ್ಷೇತ್ರ.

Electroscope 

ಎಲೆಕ್ಟ್ರೋಸ್ಕೋಪ್ – ವಿದ್ಯುತ್ ಸಾಮರ್ಥ್ಯ ಶೋಧಕ – ವಿದ್ಯುತ್ ಅಂತಃ ಸಾಮರ್ಥ್ಯವ್ಯತ್ಯಾಸವನ್ನು ಪತ್ತೆ ಮಾಡುವ ಉಪಕರಣ.

Electroplating

ಎಲೆಕ್ಟ್ರೋಪ್ಲೇಟಿಂಗ್ – ವಿದ್ಯುಲ್ಲೇಪನ – ಒಂದು ಘನವಸ್ತುವಿನ ಮೇಲ್ಮೈಗೆ ವಿದ್ಯುದ್ವಿಭಜನೆಯ ಮೂಲಕ ಒಂದು ಲೋಹವನ್ನು ಲೇಪಿಸುವುದು‌.

Electro optical effect 

ಎಲೆಕ್ಟ್ರೋಆಪ್ಟಿಕಲ್ ಎಫೆಕ್ಟ್ – ವಿದ್ಯುತ್ ದೃಶ್ಯ ಬೆಳಕು ಪರಿಣಾಮ – ಯಾವುದಾದರೊಂದು ಪಾರದರ್ಶಕ‌ ವಿದ್ಯುತ್ ನಿರೋಧಕ ವಸ್ತುವೊಂದನ್ನು ತುಂಬ ಬಲವತ್ತರವಾದ ವಿದ್ಯುತ್ ಕ್ಷೇತ್ರದಲ್ಲಿರಿಸಿದಾಗ ಆ ಕ್ಷೇತ್ರದ ಹಾಗೂ ಆ ವಸ್ತುವಿನ ವಕ್ರೀಭವನದ ಗುಣಲಕ್ಷಣಗಳ ನಡುವೆ ಉಂಟಾಗುವ ಅಂತರ್ ಕ್ರಿಯೆ. 

ಕನ್ನಡ ಗಾದೆಮಾತು – ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ.

ಕನ್ನಡದ ಒಂದು ಪ್ರಸಿದ್ಧ ಗಾದೆಮಾತಿದು.‌ ಕೆಲವು ಜನರು ಮೋಸ, ದಗಾ, ವಂಚನೆಗಳಂತಹ ಅನಾಚಾರಗಳನ್ನು ಅಂದರೆ ಕೆಟ್ಟ ಕೆಲಸಗಳನ್ನು ಮಾಡುತ್ತಿದ್ದರೂ ಮನೆಯ ಮುಂದೆ ಬೃಂದಾವನ ನೆಟ್ಟು, ಎದ್ದು ಕಾಣುವಂತೆ ತುಳಸಿ ಪೂಜೆ ಮಾಡುತ್ತಾ, ತಾವು ತುಂಬ ಒಳ್ಳೆಯವರು, ದೈವಭಕ್ತರು ಎಂಬ ನಟನೆ ಮಾಡುತ್ತಿರುತ್ತಾರೆ. ಇಂತಹವರ ನಿಜಗುಣವು ಒಂದಲ್ಲಾ ಒಂದು ದಿನ ಬಯಲಾಗುತ್ತದೆ.  ಹಾಗೆ ಬಯಲಾದ ದಿನ ಅವರ ಮನೆಯ ಸುತ್ತಮುತ್ತ ವಾಸಿಸುವವರು, ಅವರ ಪರಿಚಿತರು ಮೇಲ್ಕಂಡ ಗಾದೆಮಾತನ್ನು ಹೇಳಿ ಅವರನ್ಬು ಲೇವಡಿ ಮಾಡುತ್ತಾರೆ. ಹೀಗಾಗಿ ಇಂತಹ ಅಹಿತಕರ ಸಂದರ್ಭಗಳಿಗೆ […]

ಚಟ್ನಿಯ ಪ್ರಸಂಗ

ಚಟ್ನಿ. ಈ ಪದದ ಬಳಕೆ ಮಾಡದ ಕನ್ನಡಿಗರಾರು? ಇಡ್ಲಿ ಚಟ್ನಿ, ತೆಂಗಿನಕಾಯಿ ಚಟ್ನಿ, ಕೆಂಪು ಚಟ್ನಿ, ಪುದಿನಾ ಚಟ್ನಿ, ಶೇಂಗಾ ಚಟ್ನಿ, ಈರುಳ್ಳಿ ಚಟ್ನಿ… ಓಹ್…..ಅದೆಷ್ಟು ವೈವಿಧ್ಯ ಇದರಲ್ಲಿ! ವಿವಿಧ ತರಕಾರಿಗಳು, ಹಣ್ಣುಗಳು, ಒಣಹಣ್ಣುಗಳನ್ನು ಬಳಸಿ ಥರಾವರಿ ಚಟ್ನಿಗಳನ್ನು ಪ್ರಪಂಚದಾದ್ಯಂತ ಮಾಡುತ್ತಾರೆ.‌ಉತ್ತರ ಭಾರತೀಯ‌ರ ಚಾಟ್ ಅಂಗಡಿಗಳಲ್ಲಿ ಸಿಹಿ ಚಟ್ನಿ ಮಾಡುವಾಗ ಖರ್ಜೂರ ಹಾಕ್ತಾರಂತೆ! ಹೋಟೆಲ್ ಗಳಲ್ಲಿ ತಾವು ಇಡ್ಲಿಗೆ ‘ಅನ್ಲಿಮಿಟೆಡ್ ಚಟ್ನಿ’ ಕೊಡುತ್ತೇವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಧಾರವಾಡದ ಕಡೆ ಚಟ್ನಿಪುಡಿಗೆ ಚಟ್ನಿ ಅಂತಾರೆ. ಮಂಗಳೂರಿನಲ್ಲಿ ತೆಳು […]

Page 3 of 3

Kannada Sethu. All rights reserved.