‘ಬೆಳಗಿನ ಶುಭೋದಯ’ ಏಕೆ, ಶುಭೋದಯ ಸಾಕಲ್ಲವೇ?

ಗುಡ್ ಮಾರ್ನಿಂಗ್ ಎಂದು ಇಂಗ್ಲಿಷ್ ಭಾಷೆಯಲ್ಲಿ ಹೇಳುವ ಬದಲು  ಕನ್ನಡದಲ್ಲಿ ಅದನ್ನು ಹೇಳಬಯಸುವವರು ‘ಬೆಳಗಿನ ಶುಭೋದಯ’ ಎಂದು ಹೇಳುವುದನ್ನು ನಾವು ಅನೇಕ ಸಾರಿ ಗಮನಿಸುತ್ತೇವೆ. ಶುಭೋದಯ ಎಂಬ ಒಂದು ಪದದಲ್ಲಿ ಗುಡ್( ಶುಭ) ಮತ್ತು ಉದಯ( ಮಾರ್ನಿಂಗ್) ಎಂಬ ಎರಡೂ ಪದಗಳಿವೆ! ಹೀಗಾಗಿ ಬೆಳಗಿನ ಶುಭೋದಯ ಎಂದು ಹೇಳಿದಾಗ ಗುಡ್ ಮಾರ್ನಿಂಗ್ ಆಫ್ ಮಾರ್ನಿಂಗ್ ಎಂಬ ಅರ್ಥ ಬರುತ್ತದೆ! ಹೀಗಾಗಿ‌ ಶುಭೋದಯ ಸಾಕು. ‘ಬೆಳಗಿನ ಶುಭೋದಯ’ ಬೇಡ. ಇನ್ನು ಕೆಲವರು ಗುಡ್ ಆಫ್ಟರ್ ನೂನ್ ಗೆ ಕನ್ನಡದಲ್ಲಿ […]

 ದಿನಾ ಸಾಯೋರಿಗೆ ಅಳರ‍್ಯಾರು?

ಲೋಕದೊಂದಿಗೆ ನಾವು ವ್ಯವಹರಿಸುವಾಗ ನಮ್ಮ ಸುಖದುಃಖಗಳನ್ನು ಯಾರೊಂದಿಗೆ, ಎಷ್ಟರ ಮಟ್ಟಿಗೆ, ಯಾವಾಗ, ಹೇಗೆ ಹಂಚಿಕೊಳ್ಳುತ್ತೇವೆ ಎಂಬುದರ ಬಗ್ಗೆ ಲಕ್ಷ್ಯ ಕೊಡಬೇಕಾಗುತ್ತದೆ. ಸದಾಕಾಲ ತಮ್ಮ ಗೋಳುಗಳನ್ನು ಹೇಳುತ್ತಾ ಇರುವವರ ಬಗ್ಗೆ ಜನರು ಗೌರವ ಕಳೆದುಕೊಂಡು ಅವರ ಮಾತುಗಳಿಗೆ ಗಮನ ಕೊಡುವುದನ್ನು ನಿಲ್ಲಿಸಿಬಿಡುತ್ತಾರೆ – “ಅಯ್ಯೋ, ಅವರದ್ದು ದಿನಾ ಇದ್ದಿದ್ದೇ ಬಿಡು. ಒಂದಲ್ಲ ಒಂದು ವಿಷಯಕ್ಕೆ ಗೋಳಾಡ್ತಾನೇ ಇರ್ತಾರೆ. ದಿನಾ ಸಾಯೋರಿಗೆ ಅಳರ‍್ಯಾರು!’’ ಎನ್ನುತ್ತಾರೆ. ಈ ಗಾದೆಮಾತು ಎಷ್ಟು ಪರಿಣಾಮಕಾರಿಯಾದ ಉಕ್ತಿಯೆಂದರೆ ಸಾವು ಎನ್ನುವುದು ವ್ಯಕ್ತಿಗೆ ದಿನಾ ಬರುವಂತಹದ್ದಲ್ಲ ಎಂಬ […]

 “ಆಯ್ತು. ಕನ್ನಡ ಕಲಿತರೆ ನಿಂಗೆ ಪಿಜ್ಝಾ ಟ್ರೀಟ್! ಸರೀನಾ?

೨೦೧೬ರ ಜೂನ್ ತಿಂಗಳಿರಬೇಕು. ನಮ್ಮ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಒಂದು ದಿನ ನನ್ನ ಸಹೋದ್ಯೋಗಿಯೊಬ್ಬರು ನಮ್ಮ ವಿಭಾಗಕ್ಕೆ ಬಂದರು. ಅವರ ಮುಖ ತುಸು ಚಿಂತಾಗ್ರಸ್ತವಾದಂತೆ ಕಂಡಿತು. “ನನ್ನ ಮಗಂಗೆ ಏನಾದ್ರೂ ಮಾಡಿ ಕನ್ನಡ ಹೇಳಿಕೊಡ್ಬೇಕಲ್ಲಾ ಮೇಡಂ. ಅವನು ಈಗ ಒಂಬತ್ತನೇ ತರಗತೀಲಿದಾನೆ. ಕೇಂದ್ರೀಯ ವಿದ್ಯಾಲಯದಲ್ಲಿ ಓದ್ತಾನೆ. ಅಲ್ಲಿ ಕನ್ನಡ ಇಲ್ಲ,*** ಹಿಂದಿ ಓದೋದು ಅವ್ನು. ನಿನ್ನೆ ನಮ್ಮೂರು ಮೈಸೂರಿಗೆ ರೈಲಲ್ಲಿ ಹೋಗಿದ್ವಿ.

Page 2 of 2

Kannada Sethu. All rights reserved.