“ಅಧ್ಯಾಪಕರು ಚಿರಂತನ ಆಶಾವಾದಿಗಳು” ಎಂಬ ಒಂದು ಮಾತಿದೆ. ನಾಳೆಯ ಪ್ರಜೆಗಳಾದ ವಿದ್ಯಾರ್ಥಿಗಳ ಮನಸ್ಸನ್ನು ರೂಪಿಸುವ ಕೆಲಸ ಮಾಡುವ ಅವರು ಮುಂದಿನ ಪೀಳಿಗೆಗಳ ಬಗ್ಗೆ ಭರವಸೆ ಕಳೆದುಕೊಳ್ಳಬಾರದು ಎಂಬ ಆಶಯ ಈ ಸೂಕ್ತಿಯ ಹಿಂದೆ ಇದೆ ಅನ್ನಿಸುತ್ತೆ. ಈ ಹಿನ್ನೆಲೆಯಲ್ಲಿ ಒಬ್ಬ ಕನ್ನಡ ಅಧ್ಯಾಪಕಿಯಾಗಿ ನಾನು ಮುಂದಿನ ಪೀಳಿಗೆಗಳು ಕನ್ನಡವನ್ನು ತಮ್ಮ ಹೃದಯಕ್ಕೆ ಹತ್ತಿರವಿರಿಸಿಕೊಳ್ಳುವಂತೆ ಪ್ರೇರೇಪಿಸಲು ಏನು ಮಾಡಬಹುದು ಎಂದು ಯೋಚಿಸುತ್ತಾ ಇರುತ್ತೇನೆ. ಹೀಗೆ ಯೋಚಿಸಿದಾಗ ಈ ಅಧ್ಯಾಪಕಿಗೆ ತೋಚಿದ ಒಂದು ಸರಳ ಉಪಾಯ ಅಂದರೆ ಪ್ರತಿದಿನವೂ ತರಗತಿಯಲ್ಲಿ ಕರಿಹಲಗೆಯ […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!