ಜೀವನ ಎಂಬುದು ಅನೂಹ್ಯ ಘಟನಾವಳಿಯ ಸರಮಾಲೆ. ಸಣ್ಣ ಹುಡುಗಿಯಾಗಿದ್ದಾಗಿನಿಂದ ನಾನು ಶಾಲೆಗೆ ಹೋಗುವುದರ ಜೊತೆಜೊತೆಗೆ ಕರ್ನಾಟಕ ಸಂಗೀತ ಹಾಗೂ ಭರತನಾಟ್ಯ ತರಗತಿಗೆ ಹೋಗುತ್ತಿದ್ದವಳು. ಪದವಿಪೂರ್ವ ಹಾಗೂ ಪದವಿ ತರಗತಿಗಳಲ್ಲಿ ವಿಜ್ಞಾನ ವಿಷಯಗಳನ್ನು ಓದಿದವಳು. ನಮ್ಮ ವಿದ್ಯಾಭ್ಯಾಸದ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಎಂಬ ಮೂರು ದಾರಿಗಳು ಗೆರೆ ಕೊರೆದಂತೆ ಸ್ಪಷ್ಟವಾಗಿದ್ದವಲ್ಲ. ಇದರ ಜೊತೆಗೆ, ಬೆರಳಚ್ಚು ಮತ್ತು ಶೀಘ್ರಲಿಪಿಗಳು ವಾಣಿಜ್ಯ ವಿದ್ಯಾರ್ಥಿಗಳು ಕಲಿಯುವ ವಿಷಯಗಳು ಎಂಬ ಭಾವನೆಯೂ ನನ್ನಲ್ಲಿ ಯಾಕೋ ಏನೋ ಬಹಳ ಗಟ್ಟಿಯಾಗಿತ್ತು! ನಾನು […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!