ಈ ತಿಂಗಳು ಅಂದರೆ ನವೆಂಬರ್ 2023ರ ಕಸ್ತೂರಿ ಮಾಸಪತ್ರಿಕೆಯಲ್ಲಿ ಒಂದು ಉತ್ತಮ ಲೇಖನ ಬಂದಿದೆ. ಜಯತನಯ ಎಂಬವರು ಬರೆದ “ಕನ್ನಡ ಹಿತರಕ್ಷಣೆಗೆ ಏನು ಮಾಡಬೇಕು?” ಎಂಬ ಲೇಖನ ಅದು. ಆ ಲೇಖನದಲ್ಲಿನ ಒಂದು ವಿಷಯ ನನ್ನ ಗಮನ ಸೆಳೆಯಿತು. ಪೆಟ್ರೋಲನ್ನು ಉಳಿಸಬೇಕು ಅಂದರೆ ಅದನ್ನು ಬಳಸಬಾರದು, ಆದರೆ ಕನ್ನಡವನ್ನು ಉಳಿಸಬೇಕು ಅಂದರೆ ಅದನ್ನು ಬಳಸಬೇಕು ಎಂಬ ಮಾತು ಅದು. ಎಷ್ಟು ನಿಜ ಅಲ್ಲವೇ? “ಹಿಂಗಾದ್ರೆ ಹೆಂಗೆ ಸ್ವಾಮಿ ಕನ್ನಡದುದ್ಧಾರ, ಭಾಷೆ ಬಳಸಿ ಬಳಸಿ ಮಾಡ್ಬೇಕ್ ನಾವೆ ಕನ್ನಡ […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!