ಯಾವುದೇ ಕವಿತೆಯ ಕೇಂದ್ರವೆಂದರೆ ಅದು ಭಾವ. ಕವಿಯ ಅನುಭವದ ಅಭಿವ್ಯಕ್ತಿ ಅಥವಾ ಭಾವದ ಭಾಷಾರೂಪೀ ಪ್ರಕಟಣೆಯೇ ಕವಿತೆ. ಅಧ್ಯಾಪಕರು ವಿದ್ಯಾರ್ಥಿಗಳಿಗೆ ಕವಿತೆಯನ್ನು ಪಾಠ ಮಾಡುವಾಗ ಅದನ್ನು ವಾಚಿಸುವ ರೀತಿಯು ಬಹಳ ಮುಖ್ಯ ವಾಗುತ್ತದೆ. ಏಕೆಂದರೆ ಸರಿಯಾದ ಒತ್ತು, ಸ್ವರಭಾರ, ಧ್ವನಿಯ ಏರಿಳಿತಗಳು ಕವಿತೆಯ ಭಾವದ ಜಾಡು ಹಿಡಿಯುತ್ತವೆ. ಉದಾಹರಣೆಗೆ, ‘ಸಾಮಾನ್ಯನೇ ಈ ಗಾಂಧಿ’ ಎಂಬ ಸಾಲು. ಸಾಮಾನ್ಯನೇ ಎಂಬುದನ್ನು ಉಚ್ಚರಿಸುವ ಎರಡು ಬೇರೆ ಬೇರೆ ರೀತಿಗಳಿಂದ ಗಾಂಧಿ ಎಲ್ಲರಂತೆ ಸಾಮಾನ್ಯನೇ ಅನ್ನುವ ಅರ್ಥವೂ ಬರಬಹುದು, ಅಥವಾ ಅವನು […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!