`ನೆನಪು ಬಾಳಿನ ಬುತ್ತಿ’ ಎಂದಿದೆ ಒಂದು ಕವಿಮನಸ್ಸು. `ಹೇಳಿಕೊಟ್ಟ ಬುದ್ಧಿ, ಕಟ್ಟಿಕೊಟ್ಟ ಬುತ್ತಿ ಎಷ್ಟು ದಿನ ಬಂದೀತು?’ ಎನ್ನುತ್ತದೆ ಒಂದು ಕನ್ನಡ ಗಾದೆಮಾತು. ಬುತ್ತಿ ಎಂಬುದು ಕನ್ನಡದಲ್ಲಿ ಬಳಕೆಯಲ್ಲಿರುವ ಒಂದು ಪದ. ನಾಮಪದವಾದಾಗ ಅದಕ್ಕೆ “ಪ್ರಯಾಣ ಕಾಲಕ್ಕಾಗಿ ಕಟ್ಟಿ ಸಿದ್ಧಪಡಿಸಿದ ಮೊಸರನ್ನ, ಕಲಸನ್ನ ರೊಟ್ಟಿ ಮೊದಲಾದುದು’’ ಎಂಬ ಅರ್ಥಗಳಿವೆ ಅನ್ನುತ್ತದೆ ಕನ್ನಡ ಸಾಹಿತ್ಯ ಪರಿಷತ್ತಿನ ಸಂಕ್ಷಿಪ್ತ ನಿಘಂಟು. ಬುತ್ತಿ ಕ್ರಿಯಾಪದವಾದಾಗ ಆಟದಲ್ಲಿ ತೂರಿ ಬರುವ ಚಿಣ್ಣಿ, ಚೆಂಡು ಮೊದಲಾದುವನ್ನು ಹಿಡಿಯುವುದು ಎಂಬ ಅರ್ಥವಿದೆ. ಉತ್ತರ ಕರ್ನಾಟಕದ ಕೆಲವು […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!