ಹೀಗೆಯೇ ಮೊನ್ನೆ ಅಕ್ಕಮಹಾದೇವಿಯ ‘ಮರವಿದ್ದು ಫಲವೇನು’ ಎಂಬ ವಚನವೊಂದನ್ನು ಓದುತ್ತಿದ್ದಾಗ ‘ಅಗಲಿದ್ದು ಫಲವೇನು ಬಾನವಿಲ್ಲದನ್ನಕ್ಕ’ ಎಂಬ ಸಾಲನ್ನು ಓದಿದೆ. ‘ಅಗಲು’ ಎಂಬುದನ್ನು ನಾವು ಕ್ರಿಯಾಪದವಾಗಿ ದೂರವಾಗು ಎಂಬ ಅರ್ಥದಲ್ಲಿ ಸಾಮಾನ್ಯವಾಗಿ ಬಳಸುತ್ತೇವೆ ಅಲ್ಲವೇ? ಈ ಪದ ಕೇಳಿದ ತಕ್ಷಣ ಪ್ರೇಮಿಗಳ ‘ಅಗಲಿಕೆ’, ‘ಎಂದೆಂದೂ ನಿನ್ನನು ಅಗಲಿ ನಾನಿರಲಾರೆ’ ಎಂಬ ಅಣ್ಣಾವ್ರ ಹಾಡಿನ ಸಾಲು, ‘ಅಗಲಿ ಇರಲಾರೆನೋ ನಿನ್ನನ್ನ’ ಎಂಬ ರಂಗಗೀತೆ ನೆನಪಾಗುತ್ತವೆ ತಾನೇ. ಇಲ್ಲಿ ಯಾವ ಅರ್ಥದಲ್ಲಿ ‘ಅಗಲು’ ಎಂಬ ಪದವನ್ನು ವಚನಕಾರ್ತಿ ಬಳಸಿರಬಹುದು ಎಂದು ಯೋಚಿಸುತ್ತಾ […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!