ನಾನು ಸದ್ಯದಲ್ಲಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಒಂದು ಭಾಗವಾದ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ, ಕನ್ನಡ ಸಹ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ವೃತ್ತಿಯ ಭಾಗವಾಗಿ ನಾನು ನನ್ನ ವಿದ್ಯಾರ್ಥಿನಿಯರೊಂದಿಗೆ, ಆದಷ್ಟೂ ಕನ್ನಡ ಪದಗಳನ್ನು ಬಳಸಿ ಮಾತಾಡುವ ಪ್ರಯತ್ನದಲ್ಲಿ ತೊಡಗಿರುತ್ತೇನೆ. ಬೆಂಗಳೂರಿಗರು ವ್ಯಾಪಕವಾಗಿ ಬಳಸುವ `ಕಂಗ್ಲೀಷನ್ನು'(ಅಂದರೆ, ಕನ್ನಡ ಇಂಗ್ಲಿಷ್ ಸೇರಿದ ಕನ್ನಡದ ಒಂದು ಭಾಷಾರೂಪವನ್ನು) ಕಡಿಮೆ ಬಳಸಬೇಕು ಎಂಬ ಉದ್ದೇಶವು ಸಹ ಇದರ ಹಿಂದೆ ಇದೆ ಅನ್ನಿ.
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.