ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಭಾಷೆಯ ಪದಗಳನ್ನು ಲೀಲಾಮಯವಾಗಿ, ಗರಿಷ್ಠ ಅರ್ಥವಿಸ್ತಾರದಲ್ಲಿ ಬಳಸುತ್ತಿದ್ದ ರೀತಿಯು ತುಂಬ ವಿಶಿಷ್ಟವಾದದ್ದು. ಒಂದೇ ಪದಕ್ಕಿರುವ ಬೇರೆ ಬೇರೆ ಅರ್ಥಗಳನ್ನು ದುಡಿಸಿಕೊಳ್ಳುತ್ತಿದ್ದದ್ದು, ಹೆಚ್ಚುಕಮ್ಮಿ ಒಂದೇ ಉಚ್ಚಾರವುಳ್ಳ ಆದರೆ ಅಪಾರ ಅರ್ಥ ವ್ಯತ್ಯಾಸವುಳ್ಳ ಪದಗಳನ್ನು ಒಟ್ಟೊಟ್ಟಿಗೆ ಬಳಸಿ ಶ್ರಾವ್ಯಸುಂದರ ಹಾಗೂ ಅರ್ಥಬಂಧುರ ಲೋಕವನ್ನು ಸೃಷ್ಟಿಸುವ ಅದ್ಭುತ ಶಕ್ತಿ ಅವರಲ್ಲಿತ್ತು. ಅದಕ್ಕೆ ಒಂದು ಉದಾಹರಣೆ ಅಂದರೆ ಅವರು ಕನಸು ಮತ್ತು ಕಣಸು ಎಂಬ ಪದಗಳನ್ನು ತಮ್ಮ ಕವಿತೆಯೊಂದರಲ್ಲಿ ಬಳಸಿರುವ ರೀತಿ. ಪ್ರಸ್ತುತ ಕವಿತೆಯ […]
ಕನ್ನಡ ಪ್ರಸಂಗ
ಇದು ಲೇಖಕಿಯು ಕನ್ನಡದೊಂದಿಗೆ ಒಡನಾಡಿದ ಅನುಭವಗಳ ಕಥನವಾಗಿದೆ. ಕನ್ನಡ ಜಗತ್ತು ತನಗೆ ಕಲಿಸಿದ ಹಾಗೂ ಕನ್ನಡ ಭಾಷೆ ಹಾಗೂ ಸಾಹಿತ್ಯಗಳನ್ನು ತಾನು ಕಲಿಸಿದ ದಾರಿಯಲ್ಲಿನ ವಿವಿಧ ಅನುಭವಗಳನ್ನು ಓದುಗರೊಂದಿಗೆ ಹಂಚಿಕೊಳ್ಳುವ ಪ್ರಯತ್ನವಾಗಿರುತ್ತದೆ ಇದು. ವಾರಕ್ಕೆ ಒಂದು ಕನ್ನಡ ಪ್ರಸಂಗದಂತೆ ಈ ಅಂಕಣವು ಮೂಡಿ ಬರಲಿದೆ.
Like us!
Follow us!