ಇದು ಕನ್ನಡದ ಒಂದು ಪ್ರಸಿದ್ಧ ಗಾದೆಮಾತು. ಸಾಮಾನ್ಯವಾಗಿ ಮನುಷ್ಯರು ತಾವು ಮಾಡುವ ತಪ್ಪುಗಳಿಗೆ ಕುರುಡಾಗಿರುತ್ತಾರೆ. ತಾವು ಮಾಡುವುದು ಸರಿ ಎಂಬ ಭಾವ ಸದಾ ಅವರಲ್ಲಿ ಇರುತ್ತದೆ. ಇನ್ನೊಬ್ಬರ ತಪ್ಪನ್ನು ಬೇಗ ಕಂಡುಹಿಡಿಯುವ ಜನರು ತಮ್ಮ ತಪ್ಪನ್ನು ಬೇಗ ಅರ್ಥ ಮಾಡಿಕೊಳ್ಳುವುದಿಲ್ಲ. ಹೇಗೆ ನಮ್ಮ ಬೆನ್ನು ನಮಗೆ ಕಾಣುವುದಿಲ್ಲವೋ ಹಾಗೆ ನಮ್ಮ ತಪ್ಪು ನಮಗೆ ಅರ್ಥವಾಗುವುದಿಲ್ಲ ಎಂಬುದು ಈ ಗಾದೆ ಮಾತಿನ ಅರ್ಥ.
ಕನ್ನಡ ವಿವೇಕ
ಬದುಕನ್ನು ಹಸನು ಮಾಡಲು ಕನ್ನಡ ಭಾಷೆ, ಸಂಸ್ಕೃತಿಯು ನಮಗೆ ನೀಡಿದ ಕೆಲವು ಗಾದೆ, ಸೂಕ್ತಿ, ನಾಣ್ಣುಡಿ, ಲೋಕೋಕ್ತಿ, ನಲ್ವಾತು ಇವುಗಳಲ್ಲಿ ವಾರಕ್ಕೆ ಒಂದರ ಕಿರು ಪರಿಚಯವನ್ನು ಈ ಅಂಕಣದಲ್ಲಿ ಮಾಡಿಕೊಡಲಾಗುತ್ತದೆ.
Like us!
Follow us!