ಈ ಗಾದೆಮಾತು ನಮಗೊಂದು ಎಚ್ಚರಿಕೆ ನೀಡುತ್ತದೆ. ಅದೇನೆಂದರೆ, ನಾವು ಜೀವನದಲ್ಲಿ ಸೋಮಾರಿಗಳಾಗಬಾರದು ಎಂಬ ಎಚ್ಚರಿಕೆ ಅದು. ನಮ್ಮ ಜೀವನೋಪಾಯಕ್ಕಾಗಿ ನಮ್ಮಲ್ಲಿರುವ ಕುಡಿಕೆಯಲ್ಲಿನ ಅಂದರೆ ಸಂಗ್ರಹಿತ ಹಣವನ್ನೇ ಬಳಸುತ್ತಿರಬಾರದು, ಹಾಗೆ ಬಳಸಿದರೆ ಅದು ಬಹಳ ಬೇಗ ಖರ್ಚಾಗಿ ಹೋಗಿ ನಾವು ಬೀದಿಗೆ ಬೀಳುವ ಪರಿಸ್ಥಿತಿ ಬಂದುಬಿಡುತ್ತದೆ. ಕುಳಿತು ತಿನ್ನುವವರು ಅಂದರೆ ದುಡಿಯದೆ ಸೋಮಾರಿಗಳಾಗಿ ಜೀವಿಸುವವರು ಎಂದು ಅರ್ಥ. ಇಂತಹವರ ಹತ್ತಿರ ಎಷ್ಟೇ ಹಣಸಂಗ್ರಹ ಇದ್ದರೂ, ಸಂಪಾದಿಸದೆ ಬರೇ ಖರ್ಚು ಮಾಡುವುದರಿಂದ ಅದು ನೀರಿನಂತೆ ಖರ್ಚಾಗಿ ಹೋಗಿ, ಅವರು ಭಿಕ್ಷೆ […]
ಕನ್ನಡ ವಿವೇಕ
ಬದುಕನ್ನು ಹಸನು ಮಾಡಲು ಕನ್ನಡ ಭಾಷೆ, ಸಂಸ್ಕೃತಿಯು ನಮಗೆ ನೀಡಿದ ಕೆಲವು ಗಾದೆ, ಸೂಕ್ತಿ, ನಾಣ್ಣುಡಿ, ಲೋಕೋಕ್ತಿ, ನಲ್ವಾತು ಇವುಗಳಲ್ಲಿ ವಾರಕ್ಕೆ ಒಂದರ ಕಿರು ಪರಿಚಯವನ್ನು ಈ ಅಂಕಣದಲ್ಲಿ ಮಾಡಿಕೊಡಲಾಗುತ್ತದೆ.
Like us!
Follow us!